ಬೆಂಗಳೂರು: ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2023-03-29 05:49 GMT

ಬೆಂಗಳೂರು: ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವುದು ಬುಧವಾರ ವರದಿಯಾಗಿದೆ.

ನಗರದ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ರಾತ್ರಿ ಸುಮಾರು 2:30ರ ವೇಳೆಗೆ ನಿಲ್ಲಿಸಿದ್ದ ಕಾರ್ ಳಿಗೆ ಆಕಸ್ಮಿಕ ಬೆಂಕಿ  ತಗುಲಿದ್ದು, ಸುತ್ತಮುತ್ತ ಕಾರ್‌ಗಳಿಗೆ ಬೆಂಕಿ ತಗಲಿದ್ದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ಕರೆ ಮಾಡಿ, ಅಗ್ನಿಶಾಮಕದವರು ಮತು ಸ್ಥಳೀಯರು ಸೇರಿಕೊಂಡು ಬೆಂಕಿಯನ್ನು ನಂದಿಸಿದ್ದಾರೆನ್ನಲಾಗಿದೆ. ಬೆಂಕಿ ತಗುಲಿದ ಪರಿಣಾಮ ಒಂದು ಕಾರು ಸುಟ್ಟು ಕರಕಲಾಗಿದ್ದು, ಕಾರಿನಲ್ಲಿ ವ್ಯಕ್ತಿಯ ಶವ ಇರುವುದು ಕಂಡುಬಂದಿದೆ.

ಕಾರಿನಲ್ಲಿ ಅಪರಿಚಿತ ವ್ಯಕ್ತಿ ರಾತ್ರಿ ಮಲಗಿರುವ ಹಾಗೂ ಕಾರಿಗೆ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರು ಅರೆಬರೆ ಸುಟ್ಟಿದ್ದು, ವ್ಯಕ್ತಿ ಸಜೀವ ದಹನ ಆಗಿದ್ದಾನೆ ಎಂದು ಅನುಮಾನಿಸಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆಯಾವನ್ನೂ ತನಿಖೆ ನಡೆಸುತ್ತಿದ್ದಾರೆ. 

Similar News