ಮಂಡ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತರ ಬಲೆಗೆ

Update: 2023-03-29 11:06 GMT

ಮಂಡ್ಯ, ಮಾ.29: ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ(ವಿಎ)ಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ನಗರದ ಗುತ್ತಲು ಬಡಾವಣೆಯ ನಿವಾಸಿ ರೈತ ಆತ್ಮಾನಂದ ಎಂಬುವರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್.ರೂಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಆತ್ಮಾನಂದ ಅವರ ಜಮೀನಿನನ್ನು ಒಟ್ಟುಗೂಡಿಸಿ ಪೋಡಿ ಮಾಡಿ ಆರ್‌ಟಿಸಿ ಮಾಡಿಕೊಡಲು ರೂಪ ಅವರು 15 ಸಾವಿರ ರೂ. ಬೇಡಿಕೆ ಇಟ್ಟಿದ್ದು, ಬುಧವಾರ ಮುಂಗಡವಾಗಿ 5 ಸಾವಿರ ರೂ. ಪಡೆಯುತ್ತಿದ್ದಾಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್  ಬ್ಯಾಟರಾಯಗೌಡ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಂಕರ್, ಶರತ್, ಹೇಮಾವತಿ, ನಂದಿನಿ ಅವರ ತಂಡ ದಾಳಿ ನಡೆಸಿತು ಎಂದು ಲೋಕಾಯುಕ್ತ ಎಸ್ಪಿ ಪುಟ್ಟಮಾದಯ್ಯ ತಿಳಿಸಿದ್ದಾರೆ.

Similar News