ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದು ನಿಲ್ಲಿಸಿದಾಗ ದ್ವೇಷಭಾಷಣಗಳೂ ನಿಲ್ಲುತ್ತವೆ: ಸುಪ್ರೀಂಕೋರ್ಟ್‌

Update: 2023-03-29 14:32 GMT

ಹೊಸದಿಲ್ಲಿ: ದ್ವೇಷದ ಭಾಷಣಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಗಂಭೀರವಾಗಿ ಪರಿಗಣಿಸಿದ್ದು, ರಾಜಕೀಯದಿಂದ ಧರ್ಮವನ್ನು ಬೇರ್ಪಡಿಸಿದ ಕ್ಷಣದಿಂದ ಧ್ವೇಷ ಭಾಷಣಗಳು ನಿಲ್ಲುತ್ತವೆ ಎಂದಿದೆ. ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ದ್ವೇಷ ಭಾಷಣಗಳನ್ನು ಮಾಡುವ ಕ್ಷುಲ್ಲಕ ವ್ಯಕ್ತಿಗಳಿಂದ ಜನರು ಅಂತರ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು, ದೂರದ ಪ್ರದೇಶಗಳು ಮತ್ತು ಮೂಲೆ ಮೂಲೆಗಳಿಂದ ಜನರು ಅವರ ಭಾಷಣ ಕೇಳಲು ಬಂದು ಸೇರುತ್ತಿದ್ದರು ಎಂದು ಹೇಳಿದೆ.

ಧ್ವೇಷ ಭಾಷಣ ಮಾಡಿದಕ್ಕಾಗಿ ಎಷ್ಟು ಜನರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಬಹುದು ಎಂದು ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿದೆ.

Similar News