ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನಿಂದ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಿ: ಕರ್ನಾಟಕ ಬಹುಜನ ಸಮಿತಿ

Update: 2023-03-29 18:44 GMT

ಬೆಂಗಳೂರು, ಮಾ.29: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಮೀಸಲು ಕ್ಷೇತ್ರಗಳಾದ ಸಿ.ವಿ.ರಾಮನ್‍ನಗರ, ಪುಲಕೇಶಿನಗರ, ಮಹದೇವಪುರ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿಯ ಎಡಗೈ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕರ್ನಾಟಕ ಬಹುಜನ ಸಮಿತಿ ಒತ್ತಾಯಿಸಿದೆ.

ಈ ಕುರಿತು ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಬು.ಎನ್, ಪರಿಶಿಷ್ಟ ಜಾತಿಗಳಲ್ಲಿ ಎಡಗೈ ಜನಾಂಗದವರ ಜನಸಂಖ್ಯೆ ಹೆಚ್ಚಾಗಿದ್ದು, ಅತೀ ಹಿಂದುಳಿದ ಸಮುದಾಯವಾಗಿದೆ. ತಲೆಮಾರುಗಳಿಂದ ಎಡಗೈ ಸಮುದಾಯದವರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬಂದಿದ್ದು, ಪ್ರತಿ ಚುನಾವಣೆಯಲ್ಲಿ ಪಕ್ಷದಿಂದ ಜನಾಂಗಕ್ಕೆ ಅನ್ಯಾಯವಾಗಿದೆ.  ಕಾಂಗ್ರೆಸ್‍ನಲ್ಲಿ 2013ರ ಚುನಾವಣೆಯಲ್ಲಿ 10 ಸೀಟು, 2018ರಲ್ಲಿ 9 ಸೀಟು ಮಾತ್ರ ಘೋಷಣೆ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಸಮುದಾಯಕ್ಕೆ ರಾಜ್ಯದಲ್ಲಿ ಒಟ್ಟು 18 ಸೀಟು ಸಿಗಲೇ ಬೇಕು ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಸತ್ಯನಾರಾಯಣ, ಕಾರ್ಯದರ್ಶಿ ಜಗದೀಶ್ ಸೇರಿದಂತೆ ಇತರರು ಇದ್ದರು.

Similar News