ನೆಲ್ಯಾಡಿ | ರಸ್ತೆ ಅಪಘಾತಕ್ಕೆ ಮಹಿಳೆ ಬಲಿ: ಇಬ್ಬರು ಗಂಭೀರ

Update: 2023-03-30 08:08 GMT

ನೆಲ್ಯಾಡಿ, ಮಾ.30: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಮೃತರನ್ನು ಅನ್ನಪೂರ್ಣಾ(50) ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಪುತ್ರ ಅಶ್ವಿನ್ ಹಾಗೂ ಜೊತೆಗಿದ್ದ ತಂದೆ ಭಾಸ್ಕರ್ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಕಾರು ಕರ್ಬಸಂಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News