ಚುನಾವಣಾ ನೀತಿ ಸಂಹಿತೆ ಜಾರಿ | ಶಸ್ತ್ರಾಸ್ತ್ರಗಳಿಗೆ ನಿರ್ಬಂಧ; ಠಾಣೆಗಳಿಗೆ ಒಪ್ಪಿಸಲು ಕಮಿಷನರ್ ಆದೇಶ

Update: 2023-03-30 11:38 GMT

ಬೆಂಗಳೂರು, ಮಾ.30: ರಾಜ್ಯ ವಿಧಾನಸಭಾ ಸಾರ್ವತ್ರಿಕಾ ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪರವಾನಗಿ ಹೊಂದಿರುವವರ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.

ಮತದಾನ ಪ್ರಕ್ರಿಯೆ ಶೀಘ್ರದಲ್ಲಿಯೇ ನಡೆಯುವ ಹಿನ್ನೆಲೆ ಎ.10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಲು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ. 

ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಠಾಣೆಯಲ್ಲಿ ಠೇವಣಿ ಇರಿಸಿ ಚುನಾವಣೆ ಪ್ರಕ್ರಿಯೆಯು ಪೂರ್ಣಗೊಂಡ ಮೇ.16ರ ಬಳಿಕ ವಾಪಸ್ಸು ಪಡೆಯಲು ಅರ್ಹರಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.

Similar News