ಉಡುಪಿ: ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಸಿದ್ದಲ್ಲಿ ಸಂಪರ್ಕ ಕಡಿತ
Update: 2023-03-30 15:12 GMT
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು ಕಂಡುಬಂದಲ್ಲಿ ಅಂಥವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭಾ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.