ಉಡುಪಿ: ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿ ವಂಚನೆ

Update: 2023-03-30 15:38 GMT

ಉಡುಪಿ: ವ್ಯಕ್ತಿಯೊಬ್ಬರು ಖಾತೆಯಿಂದ ಲಕ್ಷಾಂತರ ರೂ. ಹಣ ವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ತಾಲೂಕಿನ ಕಾಂತಾವರದ ಚೇತನ್ ಕುಮಾರ್ ಎಂಬವರು ಬೆಂಗಳೂರಿನ ಜೀವನ ಭೀಮ ಎಂಬಲ್ಲಿ ಬ್ಯಾಂಕ್ ಖಾತೆ ಹೊಂದಿದ್ದು, ಮಾ.28 ರಂದು ಇವರ ಖಾತೆಯಿಂದ ಒಟ್ಟು  1,98,500ರೂ. ಹಣವನ್ನು ಅಪರಿಚಿತ ವ್ಯಕ್ತಿಗಳು ಅವರ ಅನುಮತಿ ಇಲ್ಲದೇ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ, ವಂಚಿಸಿರುವುದಾಗಿ ದೂರಲಾಗಿದೆ.

Similar News