ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-03-31 14:55 GMT

ಪಡುಬಿದ್ರಿ, ಮಾ.31: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.30ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಎರ್ಮಾಳು ಬಡಾ ಗ್ರಾಮದ ದಾಮೋದರ ತೋಟ ನಿವಾಸಿ ಗೋಪಾಲ ಎ.ಕರ್ಕೆರ(68) ಎಂದು ಗುರುತಿಸಲಾಗಿದೆ. ಇವರು ದೇವಸ್ಥಾನದಲ್ಲಿ  ಸತ್ಯನಾರಾಯಣ ಪೂಜೆ ಮುಗಿಸಿ ವಾಪಾಸ್ಸು ಮನೆಗೆ ನಡೆದು ಕೊಂಡು ಹೋಗುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಗೋಪಾಲ ಕರ್ಕೆರ ಹಾಗೂ ಸ್ಕೂಟರ್ ಸವಾರ ಜೈ ಪ್ರಕಾಶ್ ಹಾಗೂ ಸಹ ಸವಾರ ಪರೀಶ್ ಎಂಬವರು ರಸ್ತೆ ಬಿದ್ದು ಗಾಯ ಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲ ಕರ್ಕೇರ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News