ಸ್ಯಾಂಕಿ ಮೇಲ್ಸೇತುವೆ ವಿರೋಧಿ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು

Update: 2023-04-01 10:01 GMT

ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆಗೆ ವಿರೋಧಿಸಿ ಧರಣಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದವರ ಮೇಲೆ ನಗರದ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ​ದಾಖಲಾಗಿದೆ.

ಸ್ಯಾಂಕಿ ರಸ್ತೆ ಮೇಲ್ಸೇತುವೆ, ರಸ್ತೆ ವಿಸ್ತರಣೆ ಯೋಜನೆ ವಿರೋಧಿಸಿ ಫೆ.19ರಂದು ಸುಮಾರು 70 ಜನ ಸ್ಥಳೀಯ ನಿವಾಸಿಗಳು, ಮಕ್ಕಳು ಸೇರಿ ಸ್ಯಾಂಕಿ ಕೆರೆ ಪರಿಸರ ಉಳಿಸುವಂತೆ ಧರಣಿ ನಡೆಸಿದ್ದರು. ಅನುಮತಿ ಪಡೆಯದೇ ಧರಣಿ, ರಸ್ತೆ ಸಂಚಾರಕ್ಕೆ ಅಡಚಣೆ ಆರೋಪ ಹಿನ್ನೆಲೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದ್ದು,  ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. 

ಹೋರಾಟಗಾರರ ಆಕ್ರೋಶ: 'ಪುಟ್ ಪಾತ್ ನಲ್ಲಿ ನಡೆದು ಪ್ರತಿಭಟನೆ ಮಾಡಿದ್ದೇವೆ. ಆರೆ ಪೊಲೀಸರು ಮಾತ್ರ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ, ಸಾರ್ವಜನಿಕರಿಗೆ  ತೊಂದರೆ ಕೊಟ್ಟಿದ್ದೀರಿ. ಪೂರ್ವಾನುಮತಿ ಪಡೆಯದೇ ಹೋರಾಟ ಮಾಡಿದ್ದೀರಿ ಅಂತಾ ಕೇಸ್ ದಾಖಲಿಸಿಕೊಂಡಿದ್ದಾರೆ' ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Similar News