ಮಡಿಕೇರಿ| ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Update: 2023-04-01 10:06 GMT

ಮಡಿಕೇರಿ,ಎ.1: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ಇಂಜಿಲಗೆರೆ ಗ್ರಾಮದ ಕಲ್ಲುಕೊರೆ ನಿವಾಸಿ ಪ್ರವೀಣ(31) ಹಾಗೂ ವಿರಾಜಪೇಟೆ ಗಾಂಧಿನಗರದ ನಿವಾಸಿ ಇಮ್ರಾನ್ ಸೋನು (22) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇವರ ಬಳಿ 1.22 ಕೆ.ಜಿ ಗಾಂಜಾ ಹಾಗೂ 770 ರೂ. ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ,ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್ ರಾಜ್ ಹಾಗೂ ವಿರಾಜಪೇಟೆ ಉಪ ವಿಭಾಗದ ಡಿ.ವೈ.ಎಸ್.ಪಿ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ನಗರ ವೃತ ನಿರೀಕ್ಷಕರಾದ ಶಿವರುದ್ರ ನಿರ್ದೇಶನದ ಮೇರೆಗೆ ವಿರಾಜಪೇಟೆ ನಗರ ಠಾಣೆಯ ಠಾಣಾಧಿಕಾರಿ ಮದನ್ ಕುಮಾರ್ ಎ.ಎಸ್.ಐ. ಮೊಹಮ್ಮದ್ ಎಂ.ಎಂ ಸಿಬ್ಬಂದಿಗಳಾದ ಗಿರೀಶ್, ಮಲ್ಲಿಕಾರ್ಜುನ, ಧರ್ಮ ಹಾಗೂ ಸತೀಶ್ ಅವರು ಕಾಯಾಚರಣೆಯಲ್ಲಿದ್ದರು. 

Similar News