ಭಟ್ಕಳ: ದಾಖಲೆ‌ ಇಲ್ಲದೆ ಲಕ್ಷಾಂತರ ರೂ. ನಗದು ಸಾಗಾಟ; ಮೂರು ಮಂದಿ ಸೆರೆ

Update: 2023-04-01 15:10 GMT

ಭಟ್ಕಳ: ದಾಖಲೆ‌ ಇಲ್ಲದೆ ಲಕ್ಷಾಂತರ ರೂ. ಹಣವನ್ನು ಕಾರಿನಲ್ಲಿ ಸಾಗಿಸುವ ವೇಳೆ ತಾಲೂಕಿನ ಸರ್ಪನಕಟ್ಟೆ ಪೋಲಿಸ್ ಚೆಕ್ ಪೋಸ್ಟ ಬಳಿ ತಪಾಸಣೆ ವೇಳೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ವರದಿಯಾಗಿದೆ.

ಯಶ್ವಂತ ಸುಕ್ರ ಗೊಂಡ ಕಟಗಾರಕೊಪ್ಪ ಭಟ್ಕಳ, ಶ್ರೀನಿವಾಸ ನಾರಾಯಣ ಗೌಡ ಗುಣವಂತೆ ಹೊನ್ನಾವರ, ರಘು ಅನಂತ ನಾಯ್ಕ ಎಂಬವರನ್ನು ಪೋಲಿಸರು ಬಂಧಿಸಿದ್ದಾರೆ.

ನಗರ ಠಾಣೆಯ ಪಿಎಸ್ಐ ಸಂತೋಷ ಹಾಗೂ ಸಿಬ್ಬಂದಿ ಸರ್ಪನಕಟ್ಟೆ ಚೆಕ್ ಪೋಸ್ಟ್ ಬಳಿ ತಪಾಸಣೆ ಸಂದರ್ಭ ಉಡುಪಿ ಕಡೆಯಿಂದ ಭಟ್ಕಳ ಕಡೆಗೆ ಕಾರಿನಲ್ಲಿ 14,90,125 ರೂ. ಹಣವನ್ನು ಸಾಗಿಸುತ್ತಿದ್ದರು. ಈ ವೇಳೆ ತಪಾಸಣೆಯ ಮಾಡಿದಾಗ ಮೂವರು ಆರೋಪಿಗಳು ಹಣವನ್ನು ಮುರುುಡೇಶ್ವರದ ಕಡೆಗೆ ಸಾಗಿಸುತ್ತಿರುವುದಾಗಿ ಪೋಲಿಸರಲ್ಲಿ ತಿಳಿಸಿದ್ದಾರೆ.

ಮೂವರು ಆರೋಪಿಗಳೊಂದಿಗೆ ಹಣ ಹಾಗೂ ಕಾರನ್ನು ವಶಕ್ಕೆ ಪಡೆದ ನಗರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News