ಉತ್ತರಾಖಂಡ: ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಾಯ

Update: 2023-04-02 10:07 GMT

ಡೆಹ್ರಾಡೂನ್:  ಉತ್ತರಾಖಂಡ ರಾಜ್ಯದ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ರವಿವಾರ ಬಸ್ ವೊಂದು  ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಸ್ಸೂರಿ-ಡೆಹ್ರಾಡೂನ್ ರಸ್ತೆಮಾರ್ಗದಲ್ಲಿ  ಬಸ್ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ನಂತರ ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸ್, ಅಗ್ನಿಶಾಮಕ ದಳ ಹಾಗೂ  ಆಂಬುಲೆನ್ಸ್  ನಿಯೋಜಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ಟ್ವೀಟಿಸಿದೆ.

"ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಹಾಗೂ  ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮಸ್ಸೂರಿ ಪೊಲೀಸರು ತಿಳಿಸಿದ್ದಾರೆ.

ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Similar News