ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ

Update: 2023-04-02 14:28 GMT

ಬೆಳಗಾವಿ, ಎ. 2: ‘ಬೆಳಗಾವಿ ಜಿಲ್ಲೆಯ ಬಿಜೆಪಿಯ ಯಾವೊಬ್ಬ ನಾಯಕರೂ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿಲ್ಲ. ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಾಲಿದ್ದಾರೆಂಬುದು ಕೇವಲ ಊಹಾಪೋಹ. ಲಕ್ಷ್ಮಣ್ ಸವದಿ ಕಾಂಗ್ರೆಸ್ ನಾಯಕರ ಜೊತೆಗೆ ಈ ಬಗ್ಗೆ ಎಲ್ಲಿಯೂ ಚರ್ಚೆ ನಡೆಸಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಣೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಥಣಿ ಕ್ಷೇತ್ರದ ಟಿಕೆಟ್ ಗೊಂದಲದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹಬ್ಬಿದೆ. ಆದರೆ, ಈ ಕುರಿತು ಅವರು ಪಕ್ಷದ ಮುಖಂಡರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ವಿವರಣೆ ನೀಡಿದರು.

‘ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕೆಲವು ಕಡೆ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದು, ಟಿಕೆಟ್ ಕೈತಪ್ಪುವ ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆದರೆ, ರಾಯಭಾಗ, ಸವದತ್ತಿ, ಕಿತ್ತೂರು ಕ್ಷೇತ್ರದಲ್ಲಿ ಸಂದಾನ ಮಾಡುತ್ತಿದ್ದೇವೆ. ಕೊನೆಯ ವರೆಗೂ ಪ್ರಯತ್ನ ಮಾಡುತ್ತೇವೆ. ಸಂಧಾನ ಸಾಧ್ಯವಾಗದಿದ್ದರೆ ಬಿಟ್ಟುಬಿಡುತ್ತೇವೆ’ ಎಂದು ಅವರು ತಿಳಿಸಿದರು.

Similar News