ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಹಾಕಿದರೆ ಶಿಸ್ತು ಕ್ರಮ: ಕಾರ್ಯಕರ್ತರಿಗೆ ಕೆಪಿಸಿಸಿ ಎಚ್ಚರಿಕೆ

Update: 2023-04-03 06:15 GMT

ಬೆಂಗಳೂರು, ಎ.3: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಇದೀಗ ಪಕ್ಷದ ಅಭ್ಯರ್ಥಿಗಳ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದೆ. 

ಈ ಸಂಬಂಧ ಪತ್ರಿಕಾ ಪ್ರಕಟನೆ ಹೊರಡಿಸಿರುವ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಸಂಚಾಲಕರಾದ ನಿವೇದಿತ್ ಆಳ್ವ, 'ಮುಂಬರಲಿರುವ ವಿಧಾನ ಸಭಾ ಚುನಾವಣೆ ಸಂಬಂಧ ಜಾಲತಾಣಗಳಲ್ಲಿ (ಫೇಸ್ ಬುಕ್ ವಾಟ್ಸಾಪ್, ಇನ್ಸಾಗ್ರಾಂ, ಟ್ವಿಟರ್ ಮತ್ತು ಇನ್ನಿತರ ಮಾದ್ಯಮಗಳಲ್ಲಿ) ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ, ಪಕ್ಷದ ನಾಯಕರುಗಳ ಅಥವಾ ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವುದಾಗಲಿ ಅಥವಾ ಕಮೆಂಟ್ ಮಾಡುವುದನ್ನು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಗಂಭೀರವಾಗಿ ಪರಿಗಣಿಸಲಿದ್ದು, ಅವರುಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ: ಮೌಢ್ಯ ಹೋಗಲಾಡಿಸಲು ಸ್ಮಶಾನದಲ್ಲಿ ಚುನಾವಣಾ ಪ್ರಚಾರ ವಾಹನಗಳಿಗೆ ಚಾಲನೆ: ಸತೀಶ್ ಜಾರಕಿಹೊಳಿ

Similar News