ಆಮ್ ಆದ್ಮಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಘೋಷಣೆ

Update: 2023-04-03 12:57 GMT

ಮಂಗಳೂರು: ಆಮ್ ಆದ್ಮಿ ಪಾರ್ಟಿ ರಾಜ್ಯ ಸಮಿತಿಯು ಬಿಡುಗಡೆ ಮಾಡಿದ ವಿಧಾನಸಭಾ ಚುನಾವಣೆಯ ಎರಡನೇ ಪಟ್ಟಿಯಲ್ಲಿ ಮಂಗಳೂರು ನಗರ ಉತ್ತರ (ಸುರತ್ಕಲ್) ಕ್ಷೇತ್ರದ ಅಭ್ಯರ್ಥಿಯಾಗಿ ಸಂದೀಪ್ ಶೆಟ್ಟಿ ಅವರ ಹೆಸರನ್ನು ಘೋಷಿಸಿದೆ.

ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭ್ಯರ್ಥಿ ಸಂದೀಪ್ ಶೆಟ್ಟಿ,  ತಾನು ಶಾಸಕನಾಗಿ ಆಯ್ಕೆಯಾದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ಶಾಲೆಗಳನ್ನು ಉನ್ನತ ಮಟ್ಟಕ್ಕೆ ಏರಿಸಲಾಗುವುದು. ಎಂಆರ್‌ಪಿಎಲ್‌ನಲ್ಲಿ ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಉತ್ತರ ಚುನಾವಣಾ ಪ್ರಚಾರ ಉಸ್ತುವಾರಿ ಕಬೀರ್ ಕಾಟಿಪಳ್ಳ, ಮಾಧ್ಯಮ ನಿರ್ವಾಹಕ ವೆಂಕಟೇಶ್ ಬಾಳಿಗ ಹಾಗೂ ಬ್ಲಾಕ್ ಅಧ್ಯಕ್ಷ ನವೀನ್ ಡಿ’ಸೋಜಾ ಉಪಸ್ಥಿತರಿದ್ದರು.

Similar News