ನಟ ಸುದೀಪ್ ಗೆ ಬೆದರಿಕೆ ಪತ್ರ: ಪ್ರಕರಣ ದಾಖಲು

Update: 2023-04-05 04:54 GMT

ಬೆಂಗಳೂರು: ನಟ ಸುದೀಪ್​ ಅವರಿಗೆ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುದೀಪ್ ಅವರ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಹೇಳಲಾಗಿದೆ. 

ಈ ಸಂಬಂಧ ಬೆದರಿಕೆ ಪತ್ರದ ಸಮೇತ ಸುದೀಪ್​ ಅವರ ಮ್ಯಾನೇಜರ್​ ಜಾಕ್​ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಸುದೀಪ್ ಖಾಸಗಿ ವಿಡಿಯೋ ಸೋರಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಲ್ಲದೆ, ಕೆಲ ಅವಾಚ್ಯ ಶಬ್ದಗಳನ್ನು ಸಹ ಪತ್ರದಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆನ್ನಲಾಗಿದೆ. 

Similar News