ದೇವೇಗೌಡರ ವಿರುದ್ಧ ಮಾನಹಾನಿಕರ ಟ್ವೀಟ್: ಠಾಣೆಗೆ ಬಂದು ಮುಚ್ಚಳಿಕೆ ಬರೆದುಕೊಟ್ಟ ಪ್ರಶಾಂತ್ ಸಂಬರಗಿ

Update: 2023-04-05 15:51 GMT

ಬೆಂಗಳೂರು, ಎ.5: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡಅವರ ಕುರಿತು ಅವಹೇಳನಕಾರಿ ಸಂದೇಶ ಪ್ರಕಟಿಸಿದ್ದ ಆರೋಪಕ್ಕೆ ಸಂಬಂಧಿಸಿ ಪ್ರಶಾಂತ್ ಸಂಬರಗಿ ಎಂಬಾತ ಇಲ್ಲಿನ ಶ್ರೀರಾಂಪುರ ಪೊಲೀಸ್ ಠಾಣೆಗೆ ಹಾಜರಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ ಎಂದು ವರದಿಯಾಗಿದೆ.

ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಿರುವ ಸಂಬಂಧ ಬುಧವಾರ ಠಾಣೆಗೆ ಹಾಜರಾದ ಪ್ರಶಾಂತ್ ಸಂಬರಗಿ, ಮುಚ್ಚಳಿಕೆಹಾಗೂ 1 ಲಕ್ಷ ರೂ. ಬಾಂಡ್‍ನೀಡಿದ್ದಾನೆ ಎನ್ನಲಾಗಿದೆ.

ಎಚ್.ಡಿ.ದೇವೇಗೌಡರ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದ ಎಂದು ಆರೋಪಿಸಿ ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದರು. ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದರು. ದೂರು ಸಂಬಂಧ ಮೊಕದ್ದಮೆ ದಾಖಲಾಗಿತ್ತು.

Similar News