ಕೋಮು ಗಲಭೆಗೆ ಪ್ರಚೋದನೆ ಆರೋಪ: ಸಚಿವ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಿದ ಚುನಾವಣೆ ಆಯೋಗ
Update: 2023-04-05 16:55 GMT
ಬೆಂಗಳೂರು, ಎ.6:ಕ್ರೈಸ್ತ ಸಮುದಾಯದವರನ್ನು ಗುರಿಯಾಗಿಸಿ ಕೋಮು ಗಲಭೆಗೆ ಪ್ರಚೋದಿಸಿದ ಆರೋಪದಡಿ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಅಖಿಲ ಭಾರತ ಕ್ರೈಸ್ತ ಮಹಾಸಭಾ ಮತ್ತು ಖಾಸಗಿ ದೂರದರ್ಶನ ವಾಹಿನಿ ಭಿತ್ತರಿಸಿರುವ ಅಂಶಗಳ ಆಧಾರ ಹಾಗೂ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂದು ಕೋಮು ದ್ವೇಷ ಭಾಷಣ ಮಾಡಿ ಅಲ್ಪಸಂಖ್ಯಾತ ಕ್ರೈಸ್ತರ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ಮಾಡಿ ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪ ಕೇಳಿಬಂದಿದೆ.
ಈ ಸಂಬಂಧಿಸಿದಂತೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ದೂರಿನ ಹಿನ್ನಲೆ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿರುವ ಚುನಾವಣೆ ಆಯೋಗದ ಅಧಿಕಾರಿ ಇಲ್ಲಿನ ರಾಜರಾಜೇಶ್ವರಿ ನಗರ ಪೋಲಿಸ್ ಠಾಣೆಯಲ್ಲಿ ನೀಡಿದ ದೂರಿನ್ವಯ ಎಫ್ ಐಆರ್ ದಾಖಲಾಗಿದೆ.