ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ: ಹೈಕೋರ್ಟ್‌

Update: 2023-04-08 06:48 GMT

ಬೆಂಗಳೂರು: 'ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶವಿದೆ' ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿರುವುದನ್ನು ಆಕ್ಷೇಪಿಸಿ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಷದ್ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯವು ಈ ಕುರಿತಂತೆ ಸ್ಪಷ್ಟಪಡಿಸಿದೆ.

ಕ್ಷೇತ್ರದಿಂದ ಆಯ್ಕೆಗೊಂಡ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದುಹಾಕುವಂತಹ ಕಾರ್ಯವಾಗಬಾರದು. ಇಂತಹ ವಿಚಾರಗಳಲ್ಲಿ ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ನ್ಯಾಯಪೀಠ ಸಲಹೆ ನೀಡಿದೆ.

'ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಕ್ಷೇತ್ರದಿಂದ ಸ್ಥಳಾಂತರಗೊಂಡವರ ಮತ್ತು ಮೃತಪಟ್ಟವರ ಹೆಸರು ತೆಗೆಯುವ ಮೂಲಕ ಪರಿಷ್ಕರಣೆ ಮಾಡಲು ಅವಕಾಶವಿಲ್ಲ' ಎಂಬ ಶಾಸಕರ ವಾದವನ್ನು ನ್ಯಾಯಪೀಠ ಇದೇ  ವೇಳೆ ತಿರಸ್ಕರಿಸಿದೆ.

Similar News