ಭ್ರಷ್ಟಾಚಾರ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಪುತ್ರ ಪ್ರಶಾಂತ್‍ಗೆ ಜಾಮೀನು ಮಂಜೂರಿಗೆ ನಕಾರ

Update: 2023-04-10 18:03 GMT

ಬೆಂಗಳೂರು, ಎ.10: ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ಕೋರ್ಟ್, ಎ.15ಕ್ಕೆ ಆದೇಶ ಕಾಯ್ದಿರಿಸಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ವಿರೂಪಾಕ್ಷಪ್ಪ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿ ನಡೆಯಿತು. 

ಪುತ್ರ ಪ್ರಶಾಂತ್ ಜಾಮೀನು ಅರ್ಜಿ ವಜಾ: ಶಾಸಕ ಮಾಡಾಳ್ ಸೂಚನೆಯಂತೆ ಕಚೇರಿಯಲ್ಲಿ 40 ಲಕ್ಷ ರೂಪಾಯಿ ಲಂಚ ಪಡೆಯುವ ಸಿಕ್ಕಿ ಬಿದ್ದಿದ್ದ ಶಾಸಕರ ಪುತ್ರ ಪ್ರಶಾಂತ್ ಕುಮಾರ್ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರಾಕರಿಸಿದೆ. ಅಲ್ಲದೆ, ಮೂರನೆ ಆರೋಪಿ ಸುರೇಂದ್ರ ಅವರು ಪ್ರಶಾಂತ್ ಸೂಚನೆಯಂತೆ ವಾಹನದಲ್ಲಿ ಹಣ ಇಟ್ಟಿದ್ದಾರೆ ಎಂಬುದನ್ನು ಹೊರತುಪಡಿಸಿ ಅವರ ವಿರುದ್ಧ ಯಾವುದೇ ಆರೋಪವಿಲ್ಲ ಎಂದಿರುವ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ. 

Similar News