ನಿಟ್ಟೆ ಡೀಮ್ಡ್ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ
ಮಂಗಳೂರು: ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ "ಎನ್-ಇಗ್ಮಾ 2023" ರಾಜ್ಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಇತ್ತೀಚೆಗೆ ನಡೆಯಿತು.
ಖ್ಯಾತ ಹಿನ್ನಲೆ ಗಾಯಕ ಅಜಯ್ ವಾರಿಯರ್ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ, ವಿವಿಧ ಕಾಲೇಜುಗಳಿಂದ ಸ್ಪರ್ಧೆಗಾಗಿ ಬಂದಿದ್ದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ ಆಫ್ ಕ್ಯಾಂಪಸ್ ಸೆಂಟರ್ನ ಕ್ಯಾಂಪಸ್ ಮೈಟೆನೆನ್ಸ್ ಡೆವಲ್ಮೆಂಟ್ ವಿಭಾಗದ ನಿರ್ದೇಶಕ ಯೋಗಿಶ್ ಹೆಗ್ಡೆ ಕಾರ್ಯಕ್ರಮ ಯಶಸ್ಸುಗೊಳ್ಳಲಿ ಎಂದು ಹಾರೈಸಿದರು.
ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ ಮಾತನಾಡಿ ಅಂತರ್ ಕಾಲೇಜು ಸ್ಪರ್ಧೆಯ ತಯಾರಿಯನ್ನು ನಡೆಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.
ಎ.4ರಂದು ನಡೆದ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಉಡುಪಿ ಬ್ರಾಂಚ್ ಎಸ್.ಐ.ಆರ್.ಸಿ.ಆಫ್.ಐ.ಸಿ.ಎ.ಐಯ ಅಧ್ಯಕ್ಷ ಸಿ.ಎ.ಮಹೇಂದ್ರ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಪ್ರಶಸ್ತಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಬಿ.ಕೆ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಮೇಶ್ ಎಂ, ವಿದ್ಯಾರ್ಥಿ ಕಾರ್ಯದರ್ಶಿ ಸ್ವೀಡಲ್ ಪಿಂಟೋ, ಉಪನ್ಯಾಸಕಿಯರಾದ ನಿಶ್ಮಿತಾ ಶೆಟ್ಟಿ ಹಾಗೂ ಮೀನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ ನಿರ್ದೇಶಕ ವಿಘ್ನೇಶ್ ಶೆಣೈ ಬಿ ವಂದಿಸಿದರು. ಕುಮಾರಿ ಮೆಲಿಟಾ ನಿರೂಪಿಸಿದರು.
2 ದಿನಗಳ ಸಾಂಸ್ಕೃತಿಕ ಮತ್ತು ಮ್ಯಾನೆಜ್ ಮೆಂಟ್ ಸ್ಪರ್ಧೆಯಲ್ಲಿ ಒಟ್ಟು 51 ಕಾಲೇಜುಗಳಿಂದ 1030 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ಆಳ್ವಾಸ್ ಪದವಿ ಕಾಲೇಜು ಸಾಂಸ್ಕೃತಿಕ ಮತ್ತು ಮ್ಯಾನೇಜ್ ಮೆಂಟ್ ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಎಂ.ಪಿ.ಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಪಡೆದುಕೊಂಡಿತು.