ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಎ.ಟಿ ರಾಮಸ್ವಾಮಿಗಿಲ್ಲ ಟಿಕೆಟ್

Update: 2023-04-12 04:26 GMT

ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಅವರಿಗೆ ಅರಕಲಗೂಡು ಕ್ಷೇತ್ರದಿಂದ ಟಿಕೆಟ್ ನಿರಾಕರಿಸಲಾಗಿದೆ.

ಇನ್ನು ಅರಕಲಗೂಡು ಕ್ಷೇತ್ರಕ್ಕೆ ಯೋಗ ರಮೇಶ್ ಅವರ ಹೆಸರನ್ನು ಘೋಷಿಸಲಾಗಿದೆ. 

ಎ.ಟಿ ರಾಮಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆಯನ್ನೂ ನಡೆಸಿದ್ದರು ಎನ್ನಲಾಗಿದೆ. ಆದರೆ, ಅಂತಿಮವಾಗಿ ಅವರು ಕಾಂಗ್ರೆಸ್ ಬದಲಾಗಿ ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಂಡ್ಯದ ಮಾಜಿ ಸಂಸದ ಎಲ್.ಶಿವರಾಮೇಗೌಡ ಅವರ ಪತ್ನಿ ಸುಧಾ ಅವರಿಗೆ ನಾಗಮಂಗಲದಿಂದ ಟಿಕೆಟ್ ನೀಡಲಾಗಿದೆ. 

Similar News