ಟಿಕೆಟ್ ನಿರಾಕರಣೆ: ಬಿಜೆಪಿಗೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ, ಬೆಂಬಲಿಗರು

Update: 2023-04-13 09:03 GMT

ಹಾವೇರಿ: ಹಾವೇರಿ ಮೀಸಲು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಹಾಲಿ ಶಾಸಕ ನೆಹರು ಓಲೇಕಾರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯು ಬುಧವಾರ ರಾತ್ರಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನೆಹರು ಓಲೇಕಾರ್ ಅವರ ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮನ್ನವರ್ ಹೆಸರನ್ನು ಘೋಷಿಸಿದೆ. ಇದರಿಂದ ಅಸಮಾಧಾನಗೊಂಡಿರುವ ಅವರು, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು. ಇನ್ನು ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. 

 'ನನ್ನ ಟಿಕೆಟ್ ತಪ್ಪಲು ಸಿಎಂ ಬಸವರಾಜ್ ಬೊಮ್ಮಾಯಿ ಕಾರಣ' ಎಂದು ಇಂದು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. 

Similar News