ತುಮಕೂರು | ಕಾರಿಗೆ ಬಸ್ ಢಿಕ್ಕಿ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Update: 2023-04-14 14:22 GMT

ತುಮಕೂರು: ಖಾಸಗಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ಬಳಿ ವರದಿಯಾಗಿದೆ.

ತುಮಕೂರು ಕಡೆಯಿಂದ ಬೆಂಗಳೂರಿಗೆ ತೆರಳುತಿದ್ದ ಇನೋವಾ ಕಾರಿಗೆ ಬೆಂಗಳೂರು ಕಡೆಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮೃತರನ್ನು ಚಳ್ಳಕೆರೆ ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಗೋವಿಂದನಾಯ್ಕ್,(58) ಅವರ ಪತ್ನಿ ತಿಪ್ಪಮ್ಮ(52) ಹಾಗೂ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದು, ಉಳಿದವರ ಹೆಸರು ಗೊತ್ತಾಗಿಲ್ಲ.

ಕಾರ್ಯನಿಮಿತ್ತ ಚಳ್ಳಕೆರೆಗೆ ಬಂದಿದ್ದ ಗೋವಿಂದನಾಯ್ಕ ದಂಪತಿ ಬೆಂಗಳೂರಿಗೆ ಮರಳುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪೂರವಾಡ್, ಎಎಸ್‍ಪಿ ಮರಿಯಪ್ಪ, ನರ ಡಿವೈಎಸ್‍ಪಿ ಶ್ರೀನಿವಾಸ್ ಅವರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Similar News