ಬಿಜೆಪಿ ತೊರೆದಿದ್ದ ಮಾಜಿ MLC ಆರ್.ಶಂಕರ್ ಎನ್ಸಿಪಿಗೆ ಸೇರ್ಪಡೆ
Update: 2023-04-14 21:15 IST
ಬೆಂಗಳೂರು, ಎ.14: ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಚಿವ ಆರ್.ಶಂಕರ್, ಶುಕ್ರವಾರ ಬೆಂಗಳೂರಿನಲ್ಲಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ಸಿಪಿ)ಕ್ಕೆ ಸೇರ್ಪಡೆಯಾದರು.
ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.