ಪೀಡೆ ತೊಲಗಿತು...: ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

Update: 2023-04-14 18:16 GMT

ಬೆಳಗಾವಿ: ''ಲಕ್ಷ್ಮಣ ಸವದಿ ನಿಮ್ಮನ್ನು ಬಿಟ್ಟು ಹೋಗಿದ್ದಾನೆ. ಪೀಡೆ ತೊಲಗಿತು'' ಎಂದು ಎಂದು ಶಾಸಕ ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. 

ಅಥಣಿ ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ''ಸೋತವನನನ್ನು ಪಕ್ಷ ಉಪ ಮುಖ್ಯಮಂತ್ರಿ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ'' ಎಂದು ಹೇಳಿದರು. 

''ರಮೇಶ್‌ ಜಾರಕಿಹೊಳಿ ಮಂತ್ರಿ ಸ್ಥಾನ ತಪ್ಪಿದಾಗ ಮತ್ತೆ ಕಾಂಗ್ರೆಸ್‌  ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ ನನಗೆ ಮಂತ್ರಿ ಸ್ಥಾನವಿಲ್ಲದಿದ್ದರೂ ನಾನು ಪಕ್ಷದಲ್ಲೇ ಇದ್ದೇನೆ, ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೊರಗೆ ಹೋಗಿರುವುದು ನನಗೆ ಸಂತೋಷ ತಂದಿದೆ'' ಎಂದರು.

Similar News