ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ
ಬಂಟ್ವಾಳ: ಸಮರ್ಥ, ಸಮೃದ್ಧ ಭಾರತ, ಸ್ವಾಭಿಮಾನದ ಭಾರತ ನಿರ್ಮಾಣಕ್ಕಾಗಿ, ಪ್ರಧಾನಿ ನರೇಂದ್ರ ಮೋದಿಯವರ ಶ್ರಮ, ಸಾರ್ಥಕತೆ ಮತ್ತು ಅವರ ಬದುಕಿನ ಸಮರ್ಪಣೆಯ ಹೋರಾಟಕ್ಕೆ ಪೂರಕವಾಗಿ ಬಂಟ್ವಾಳ ದಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಗೆಲ್ಲಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಫೂಜಾರಿ ಕರೆ ನೀಡಿದರು.
ಅವರು ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರ ನಾಮಪತ್ರ ಸಲ್ಲಿಕೆಯ ವೇಳೆ ಸೇರಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಗೋಲಿಬಾರ್ ನಡೆದಿಲ್ಲ, 144 ಸೆಕ್ಷನ್ ಜಾರಿ ಆಗಿಲ್ಲ, ಶಾಂತಿಭಂಗ ಆಗಿಲ್ಲ, ರಿಸರ್ವ್ ಪೊಲೀಸ್ ನಿಂತಿಲ್ಲ, ಇಡೀ ಬಂಟ್ವಾಳದ ಜನ ಜಾತಿ ಧರ್ಮ ವನ್ನು ಮೀರಿ ನೆಮ್ಮದಿ ಯಿಂದ ಬದುಕುತ್ತಿದ್ದಾರೆ. ಈಗಾಗಲು ಶಾಸಕ ರಾಜೇಶ್ ನಾಯ್ಕ್ ಅವರು ಕಾರಣ, ಆ ಕಾರಣಕ್ಕಾಗಿ ಮತ್ತೊಮ್ಮೆ ರಾಜೇಶ್ ನಾಯ್ಕ್ ಅವರನ್ನು ಆರಿಸುವುದು ಕ್ಷೇತ್ರದ ಪ್ರತಿಯೊಬ್ಬ ಮತದಾರರ ಕರ್ತವ್ಯ ಎಂದು ಅವರು, ಕಾಂಗ್ರೆಸ್ ಮನೆ ಮನೆಗೆ ಬಂದು ಕೊಡುತ್ತಿರುವ ಗ್ಯಾರಂಟಿ ಕಾರ್ಡ್ ಗೆ ವಾರೆಂಟಿ ಇಲ್ಲ ಎಂದು ವ್ಯಂಗ್ಯ ವಾಡಿದ ಅವರು ಈ ವಿಚಾರವನ್ನು ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತಿಳಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ನಾಮಪತ್ರ ಸಲ್ಲಿಕೆಯ ವೇಳೆ ಪೊಳಲಿಯಿಂದ ನನ್ನ ಜೊತೆ ಹೆಜ್ಜೆಗೆ ಹೆಜ್ಜೆ ಹಾಕಿ ಕಾಲ್ನಡಿಗೆಯಲ್ಲಿ ಬಂದು ಶಕ್ತಿ ನೀಡಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ನೀಡುತ್ತೇನೆ, ಕಳೆದ ಹತ್ತು ವರ್ಷಗಳಲ್ಲಿ ನನ್ನ ಪ್ರತಿ ಹೆಜ್ಜೆಯಲ್ಲಿಯೂ ಪ್ರೀತಿ ವಿಶ್ವಾಸ, ನಂಬಿಕೆ, ಸಹಕಾರ ನೀಡಿ, ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ ಕ್ಷೇತ್ರದ ಜನತೆಗೆ ನಾನು ಚಿರ ಋಣಿಯಾಗಿದ್ದೇನೆ, ಪಕ್ಷ ಮತ್ತೊಮ್ಮೆ ಅವಕಾಶ ನೀಡಿದ್ದು, ಕ್ಷೇತ್ರದ ಜನತೆಯ ನಂಬಿಕೆ ವಿಶ್ವಾಸದ ಮೇಲೆ ನಾಮಪತ್ರ ಸಲ್ಲಿಸುತ್ತಿದ್ದು, ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಂ.ಎಲ್.ಸಿ. ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ದೇವಪ್ಪ ಪೂಜಾರಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಉಪಸ್ಥಿತರಿದ್ದರು.
ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮುಂಬೈ ಕಾರ್ಪೋರೇಟರ್ ಸಂತೋಷ್ ಶೆಟ್ಟಿ ದಳಂದಿಲ, ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಒಳಚರಂಡಿ ಮತ್ತು ನಗರ ನೀರು ಸರಬರಾಜು ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಪ್ರಮುಖರಾದ ಕಸ್ತೂರಿ ಪಂಜ, ಸುಚರಿತ ಶೆಟ್ಟಿ, ಕೊರಗಪ್ಪ ನಾಯ್ಕ್, ಶರಣ್ ಪಂಪ್ ವೆಲ್, ರಾಮ್ ದಾಸ್ ಬಂಟ್ವಾಳ , ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಎ.ಗೋವಿಂದ ಪ್ರಭು, ಬಿ.ದಿನೇಶ್ ಭಂಡಾರಿ, ಉದಯರಾವ್, ಸುದರ್ಶನ ಬಜ, ಪ್ರಭಾಕರ ಪ್ರಭು, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ನಳಿನಿ ಶೆಟ್ಟಿ, ಮಾದವ ಮಾವೆ, ಪುಷ್ಪರಾಜ್ ಚೌಟ, ಕಿಶೋರ್ ಪಲ್ಲಿಪಾಡಿ, ಶ್ರೀಧರ್ ಶೆಟ್ಟಿ ಪುಳಿಂಚ, ಕಮಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ವಿಲಾಸ್ ನಾಯಕ್, ಪ್ರಕಾಶ್ ಅಂಚನ್, ಚೆನ್ನಪ್ಪ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ರಮನಾಥ ರಾಯಿ, ದಿನೇಶ್ ಅಮ್ಟೂರು, ಮೋನಪ್ಪ ದೇವಶ್ಯ, ವಜ್ರನಾಥ ಕಲ್ಲಡ್ಕ, ಭುವನೇಶ್ ಪಚ್ಚಿನಡ್ಕ, ಪ್ರದೀಪ್ ಅಜ್ಜಿಬೆಟ್ಡು, ದಿನೇಶ್ ದಂಬೆದಾರ್, ಸತೀಶ್ ಪೂಜಾರಿ ಆಳಕೆ, ಯಶೋಧರ ಕರ್ಬೆಟ್ಟು, ಸಂದೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸುಪ್ರೀತ್ ಆಳ್ಚ, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ಭಾರತಿ ಚೌಟ, ಸೀಮಾ ಮಾದವ, ಹರ್ಷಿಣಿ ಪುಷ್ಪಾನಂದ, ಶರ್ಮಿತ್ ಜೈನ್, ವೆಂಕಟೇಶ್ ನಾವುಡ, ಯಶವಂತ ಪೊಳಲಿ ಮತ್ತಿತರರು ಭಾಗವಹಿಸಿದ್ದರು.