ಚುನಾವಣಾ ಕಣಕ್ಕಿಳಿದ ಪಿಎಸ್ಸೈ ನೇಮಕಾತಿ ಹಗರಣದ ಆರೋಪಿ ರುದ್ರಗೌಡ ಪಾಟೀಲ್: ಯಾವ ಪಕ್ಷದಿಂದ ಸ್ಪರ್ಧೆ?
ಪೊಲೀಸ್ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಕೆ
Update: 2023-04-17 16:38 GMT
ಬೆಂಗಳೂರು, ಎ.17: ಪಿಎಸ್ಸೈ ನೇಮಕಾತಿ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಕಲುಬುರ್ಗಿಯ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಸದ್ಯ ರುದ್ರಗೌಡ ಪಾಟೀಲ್ ಜೈಲಿನಲ್ಲಿದ್ದು, ಸೋಮವಾರ ನಾಮಪತ್ರ ಸಲ್ಲಿಸಲು ನ್ಯಾಯಾಲಯದ ಅನುಮತಿ ಪಡೆದು, ಪೊಲೀಸ್ ಭದ್ರತೆಯಲ್ಲಿಯೇ ಆಗಮಿಸಿ ಅಫಜಲಪುರ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿದರು.
ರುದ್ರಗೌಡ ಪಾಟೀಲ್ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದರೆನ್ನಲಾಗಿದ್ದು, ಪಿಎಸ್ಸೈ ನೇಮಕಾತಿ ಅಕ್ರಮದಲ್ಲಿ ಹೆಸರು ಕೇಳಿಬಂದ ಹಿನ್ನೆಲೆ ಸಿಐಡಿ ಅಧಿಕಾರಿಗಳು ರುದ್ರಗೌಡ್ನನ್ನು ಬಂಧಿಸಿದ್ದರು.