ಕನಕಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಅಶೋಕ್ ನಾಮಪತ್ರ ಸಲ್ಲಿಕೆ

Update: 2023-04-18 10:56 GMT

ರಾಮನಗರ, ಎ.18: ಕನಕಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ಕಂದಾಯ ಸಚಿವ ಆರ್.ಅಶೋಕ್ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಕೆಗೂ ಮುನ್ನ ಕನಕಪುರ ಪಟ್ಟಣದಲ್ಲಿ ಅಶೋಕ್ ಅವರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಈ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವ ಅಶ್ವತ್ಥನಾರಾಯಣ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು. 

ಮೆರವಣಿಗೆ ಮೂಲಕ ತೆರಳಿ ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಅಶೋಕ್ ಅವರು ಉಮೇದುವಾರಿಕೆ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆಶಿ ನಾಮಪತ್ರ ಸಲ್ಲಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. 

Similar News