ವಿಧಾನಸಭೆ ಚುನಾವಣೆ ಹಿನ್ನೆಲೆ: ರಾಜ್ಯದಲ್ಲಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ

Update: 2023-04-18 11:20 GMT

ಬೆಂಗಳೂರು, ಎ.18: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಚುನಾವಣೆ ಸಂಹಿತೆಯ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಸುಗಮ ಚುನಾವಣೆಗಾಗಿ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ ಎಂದು ವರದಿಯಾಗಿದೆ.

ಇಲ್ಲಿನ ಡಿಸಿಪಿ (ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಮತ್ತು ರಾಜ ರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಇನ್ಸ್ ಪೆಕ್ಟರ್ ಗಳು  ವರ್ಗಾವಣೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Similar News