×
Ad

ದೇವರಾಜ ಅರಸು ಟ್ರಕ್ ಟರ್ಮಿನಲ್‍ ಮೇಲೆ ಲೋಕಾಯುಕ್ತ ದಾಳಿ

Update: 2023-04-18 22:15 IST

ಬೆಂಗಳೂರು, ಎ. 18: ಯಾವುದೇ ರೀತಿಯ ಕಾಮಗಾರಿಯನ್ನೆ ನಡೆಸದೆ ಬರೋಬ್ಬರಿ 55 ಕೋಟಿ ಬಿಲ್‍ಪಾವತಿಸುತ್ತಿರುವ ಆರೋಪಕ್ಕೆಸಂಬಂಧಿಸಿದಂತೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‍ಮೇಲೆ ದಾಳಿನಡೆಸಿರುವಲೋಕಾಯುಕ್ತಪೆÇಲೀಸರು, ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಇಲ್ಲಿನ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತದ ಬೆಂಗಳೂರು ನಗರ ಎಸ್ಪಿ ಕೆ.ವಿ.ಅಶೋಕ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ತನಿಖಾಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ 55 ಕೋಟಿಯನ್ನುಸಂಸ್ಥೆಯ ಅಧ್ಯಕ್ಷ ಡಿ.ಎಸ್.ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ದಾಖಲೆ ಜಪ್ತಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Similar News