ದ.ಕ.ಜಿಲ್ಲೆಯಲ್ಲಿ 17 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಡಿಸಿ ರವಿಕುಮಾರ್
ಮಂಗಳೂರು, ಎ. 19: ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಮೂಡುಬಿದರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್ ಮತ್ತು ಮ್ಯಾಕ್ಸಿಂ ಪಿಂಟೋ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ ನಾಮಪತ್ರ ಸಲ್ಲಿಸಿದ್ದಾರೆ.
*ಮಂಗಳೂರು ಉತ್ತರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎಚ್. ವಿನಯ್ ಆಚಾರ್ಯ, ಹಿಂದುಸ್ತಾನ ಜನತಾ ಪಾರ್ಟಿಯಿಂದ ಬಿ. ಪ್ರವೀಣ್ ಚಂದ್ರ ರಾವ್, ಆಮ್ ಆದ್ಮಿ ಪಕ್ಷದಿಂದ ಸಂದೀಪ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.
*ಮಂಗಳೂರು ದಕ್ಷಿಣ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಸಂತೋಷ್ ಕಾಮತ್, ಅಖಿಲ ಭಾರತ ಹಿಂದೂ ಮಹಾಸಭಾದಿಂದ ಧರ್ಮೇಂದ್ರ, ಬಿಜೆಪಿಯಿಂದ ನಿತಿನ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನ್ಸಿ ಪಿಂಟೋ ನಾಮಪತ್ರ ಸಲ್ಲಿಸಿದ್ದಾರೆ.
ಪುತ್ತೂರು ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ಇಸ್ಮಾಯಿಲ್ ಕೆ. ಶಾಫಿ ಮತ್ತು ಪಿ. ಇಬ್ರಾಹಿಂ, ಕಾಂಗ್ರೆಸ್ನಿಂದ ಅಶೋಕ್ ಕುಮಾರ್ ರೈ (2 ಸೆಟ್), ಕರ್ನಾಟಕ ರಾಷ್ಟ್ರ ಸಮಿತಿಯಿಂದ ಐವನ್ ಪೇರಾವೋ ಪಿ. ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲಾ ನಾಮಪತ್ರ ಸಲ್ಲಿಸಿದ್ದಾರೆ.
*ಸುಳ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಎಚ್. ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ನಾಮಪತ್ರಗಳು ಸ್ವೀಕೃತವಾಗಿಲ್ಲ. ನಾಮಪತ್ರಗಳ ಸಲ್ಲಿಕೆಗೆ ಎ.20 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.