×
Ad

ಮೂಡುಬಿದಿರೆ: ಜೆಡಿಎಸ್ ಅಭ್ಯರ್ಥಿ ಅಮರಶ್ರೀ ನಾಮಪತ್ರ ಸಲ್ಲಿಕೆ

Update: 2023-04-20 14:29 IST

ಮೂಡುಬಿದಿರೆ, ಎ.20: ವಿಧಾನಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

 ತಾಯಿ ಜಯಶ್ರೀ ಅಮರನಾಥ ಶೆಟ್ಟಿ, ಪಕ್ಷದ ಹಿರಿಯ ಕಾರ್ಯಕರ್ತ ಹರಿಪ್ರಸಾದ್, ಇಕ್ಬಾಲ್ ಮುಲ್ಕಿ, ನವೀನ್ ಹಾಗೂ ಬೆಂಬಲಿಗರೊಂದಿಗೆ ಪಂಚರತ್ನ ಮುಂಭಾಗದಲ್ಲಿರುವ ಅಮರನಾಥ ಶೆಟ್ಟಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯ ಮೂಲಕ ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬದಲಾವಣೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದ್ದೇನೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಉದ್ಯೋಗ, ಮಹಿಳಾ ಸಬಲೀಕರಣ, ಆರೋಗ್ಯ, ಪ್ರವಾಸ ಹಲವು ವಿಚಾರಗಳನ್ನು ತಮ್ಮ ಚುನಾವಣಾ ಪ್ರಚಾರದಲ್ಲಿ ಜನತೆಗೆ ತಿಳಿಸುತ್ತಾ ಬಂದಿದ್ದು, ಜನಪರವಾದ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಮುಂದುವರಿಯುವುದಾಗಿ ಹೇಳಿದರು.

Similar News