ಪುತ್ರನಿಗೆ ಕೈ ತಪ್ಪಿದ ಟಿಕೆಟ್: ಈಶ್ವರಪ್ಪ ಪ್ರತಿಕ್ರಿಯೆ ಏನು?

Update: 2023-04-20 16:00 GMT

ಶಿವಮೊಗ್ಗ, ಎ.20:ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಪಕ್ಷದ ವರಿಷ್ಠರು ಅವರನ್ನು ಆಯ್ಕೆ ಮಾಡಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕೆ ಬದ್ಧ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ. ಚೆನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂತೇಶ್ ಗೆ ಮುಂದಿನ ದಿನಗಳಲ್ಲಿ ಅವನ ಕಾರ್ಯವೈಖರಿ ನೋಡಿ ಪಕ್ಷ ಸೂಕ್ತಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ. ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದರು.

ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು,ಜೆಡಿಎಸ್ ಸಿದ್ದಾಂತ ಮೆಚ್ಚಿ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.

Similar News