ಮನೆಗೆ ನುಗ್ಗಿ ಚಿನ್ನಾಭರಣ ಕಳವು
Update: 2023-04-20 16:39 GMT
ಶಂಕರನಾರಾಯಣ, ಎ.20: ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿರುವ ಮನೆಯೊಂದಕ್ಕೆ ಎ.18ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಹೈಕಾಡಿಯ ಮುಹಮ್ಮದ ರಫೀಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು, ಬೆಡ್ರೂಮಿನ ಕಪಾಟಿನಲ್ಲಿದ್ದ ಸುಮಾರು 76 ಗ್ರಾಂ ತೂಕದ 3.70ಲಕ್ಷ ರೂ. ಮೌಲ್ಯದ ಬಂಗಾರ ಸರ ಮತ್ತು ಬಂಗಾರದ ಉಂಗುರ ವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.