ಪರೀಕ್ಷೆಯಲ್ಲಿ ಅನುತ್ತೀರ್ಣ: ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-04-21 10:21 GMT

ಚಾಮರಾಜನಗರ: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣವಾಗಿದ್ದರಿಂದ ಮನನೊಂದು ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ‌ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ. 

ಗುಂಡ್ಲುಪೇಟೆ ತಾಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಪಿಸಿಎಂಸಿಎಸ್ (ಕಂಪ್ಯೂಟರ್ ಸೈಯನ್ಸ್) ವಿದ್ಯಾರ್ಥಿನಿಯಾಗಿದ್ದ ವಿಜಯಲಕ್ಷ್ಮಿ, ಪರೀಕ್ಷೆ ಮುಗಿದ ನಂತರ ಸಿಇಟಿ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಹಾಸ್ಟೆಲ್ ನಲ್ಲಿದ್ದಳು ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಫಲಿತಾಂಶ ನೋಡಿದ್ದಾಳೆ. ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿಯುತ್ತಿದ್ದಂತೆಯೇ ಹಾಸ್ಟೆಲ್ ನ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. 

Similar News