ಶೆಟ್ಟರ್ ಬದಲಾಯಿಸಲು ಮೋದಿ, ಅಮಿತ್ ಶಾ ತೀರ್ಮಾನ: ಪ್ರಹ್ಲಾದ್ ಜೋಶಿ
Update: 2023-04-24 08:56 GMT
ಹುಬ್ಬಳ್ಳಿ: 'ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕೆಂದು ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮಟ್ಟದಲ್ಲಿ ನಿರ್ಧಾರವಾಗಿದೆ' ಎಂದು ಕೇಂದ್ರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ಏನೂ ಪರಿಣಾಮ ಆಗಲ್ಲ. ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದ್ವಿ, ಆದರೆ ಅವರು ಮತ್ತೊಂದು ಟೀಮ್ನಲ್ಲಿ ಆಡೋಕೆ ಹೋಗಿದ್ದಾರೆ. ಈ ಸಲ ಕಪ್ ನಮ್ದೆ' ಎಂದು ಲೇವಡಿ ಮಾಡಿದರು.
ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ಮಾತನಾಡಿದ ಅವರು, ''ಕಾಂಗ್ರೆಸ್ನ ಹಾಗೂ ರಾಹುಲ್ ಗಾಂಧಿ ಅವರಿಗೆ ಪ್ರೀತಿ ಇದ್ದರೆ ಲಿಂಗಾಯತ ಶಾಸಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಲಿ ನೋಡೋಣ'' ಎಂದು ಸವಾಲು ಹಾಕಿದರು.