ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

Update: 2023-04-24 10:04 GMT

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ.

ಕಲೀಂ (37) ಮೃತಪಟ್ಟ ಕೈದಿ ಎಂದು ತಿಳಿದು ಬಂದಿದೆ.

ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಕಲೀಂ ಕಿಡ್ನಿ ಸಮಸ್ಯೆ, ಲೋ ಬಿಪಿ, ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಈತನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾನೆ ಎಂದು ಹೇಳಲಾಗಿದೆ. 

ಪೂರ್ವನಿಯೋಜಿತ  ಕೊಲೆ: ಕುಟುಂಬಸ್ಥರ ಆರೋಪ

ಕಲೀಂ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಜೈಲಿನಲ್ಲಿ ಹಲ್ಲೆ ಮಾಡಿ ಪೂರ್ವನಿಯೋಜಿತವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

Similar News