ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳ ಅರ್ಜಿಗೆ ಪ್ರತಿಕ್ರಿಯಿಸಲು ದಿಲ್ಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ಆದೇಶ

Update: 2023-04-25 05:45 GMT

ಹೊಸದಿಲ್ಲಿ: ಕುಸ್ತಿ  ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾನಿರತ ಕುಸ್ತಿಪಟುಗಳ ಮನವಿಯ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ  ದಿಲ್ಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.  ಕುಸ್ತಿಪಟುಗಳ ಆರೋಪಗಳು ಗಂಭೀರ ವಿಚಾರ ಎಂದು ಹೇಳಿದೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಗುರುತನ್ನು ನಿಗ್ರಹಿಸಲು ಏಳು ದೂರುದಾರ ಕುಸ್ತಿಪಟುಗಳ ಹೆಸರನ್ನು ನ್ಯಾಯಾಂಗ ದಾಖಲೆಗಳಿಂದ ತೆಗೆದುಹಾಕುವಂತೆ ನ್ಯಾಯಾಲಯ ಆದೇಶಿಸಿದೆ ಹಾಗೂ ವಿಚಾರಣೆಗೆ ಎಪ್ರಿಲ್ 28 ರಂದು ದಿನಾಂಕವನ್ನು ನಿಗದಿಪಡಿಸಿದೆ.

Similar News