ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದ ಕೆ.ಎಸ್.ಈಶ್ವರಪ್ಪ

Update: 2023-04-25 13:36 GMT

ಚಿಕ್ಕಮಗಳೂರು: 'ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿಯಾಗಲಿ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಚುನಾವಣೆ ಪೂರ್ವದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂಬ ಕೂಗು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಜೋರಾಗಿದೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಸರು ಮುನ್ನೆಲೆಗೆ ಬರುತ್ತಿದೆ.

ಮಂಗಳವಾರ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಿಡಘಟ್ಟದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, 'ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿಯಾಗಲಿ. ಆದ್ದರಿಂದ ಚಿಕ್ಕಮಗಳೂರಿನ ಜನ ಸಿ.ಟಿ.ರವಿಯವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಕಳಿಸಬೇಕು' ಎಂದು ಹೇಳಿದ್ದಾರೆ. 

'ಈ ಬಾರಿ ರಾಜ್ಯದ ವಿಧಾನಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ದೇಶದ ಜನರು ಕರ್ನಾಟಕದ ವಿಧಾನಸಭೆ ಚುನಾವಣೆಯನ್ನು ಗಮನಿಸುತ್ತಿದ್ದಾರೆ. ರಾಜ್ಯದ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದರೇ ದೇಶದಾದ್ಯಂತ ಬಿಜೆಪಿ ಪಕ್ಷಕ್ಕೆ ದೊಡ್ಡ ತಿರುವು ಸಿಗಲಿದೆ. ದೇಶಕ್ಕೆ ಮತ್ತು ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ಸ್ಫೂರ್ತಿ ಸಿಗಲಿದೆ' ಎಂದರು.

Similar News