ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ, ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ: ಬಿ.ಎಸ್. ಯಡಿಯೂರಪ್ಪ

Update: 2023-04-26 05:40 GMT

ಹುಬ್ಬಳ್ಳಿ: 'ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ದಯನೀಯ ಸೋಲು ಅನುಭವಿಸಬೇಕು. ಅವರಿಗೆ ಮತದಾರರು ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರು ಗೆಲ್ಲಲು ಸಾಧ್ಯವಿಲ್ಲ. ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ ನಡೆದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ''ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ್‌ & ಟೀಮ್ ಗೆ ಪಾಠ ಕಲಿಸಬೇಕು. ಶೆಟ್ಟರ್ ಅವರನ್ನು ಮನೆಗೆ ಕಳಿಸಿ'' ಎಂದು ಕರೆ ನೀಡಿದರು. 

'ಜಗದೀಶ್ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ವಿಧಾನಸಭೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಬಿ.ಬಿ. ಶಿವಪ್ಪ ಅವರು ವಿರೋಧ ಪಕ್ಷದ ನಾಯಕರಾಗಲು ಹಟ ಹಿಡಿದಾಗ ನಾವು  ಅವರನ್ನು ಬಿಟ್ಟು ಶೆಟ್ಟರ್ ಪರವಾಗಿ ನಿಂತಿದ್ದೆವು. ಶೆಟ್ಟರ್‌ಗೆ ಏನು ಅನ್ಯಾಯ ಮಾಡಿದ್ದೆವು?' ಎಂದು ಪ್ರಶ್ನೆ ಮಾಡಿದರು.

Similar News