×
Ad

ಅತಂತ್ರ ಫಲಿತಾಂಶ, ಮುಖ್ಯಮಂತ್ರಿ ಕನಸು: ಸುಮಲತಾ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?

Update: 2023-04-27 12:57 IST

ಬೆಂಗಳೂರು: 'ಈ ಬಾರಿ ವಿಧಾನಸಭೆಯಲ್ಲಿ ಅತಂತ್ರ ಫಲಿತಾಂಶ ಬರಲಿ, ಆಗ ತಾವು ಸಿಎಂ ಆಗಬಹುದು ಎಂದು ಒಬ್ಬರು ಕಾದು ಕುಳಿತಿದ್ದಾರೆ' ಎಂಬ ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 

ಗುರುವಾರ ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ 'ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳೆಸಿಕೊಂಡಿಲ್ಲ. ಸುಮಲತಾ ಅವರೇ ಜೆಡಿಎಸ್​ನವರ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ' ಎಂದು ಹೇಳಿದರು.

ಸುಮಲತಾ ಹೇಳಿದ್ದೇನು?

ಬುಧವಾರ ಮಂಡ್ಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸುಮಲತಾ ಅವರು,  'ನಾನೇ ಮುಖ್ಯಮಂತ್ರಿ ಆಗಬೇಕು ಅಂತ ಒಬ್ಬರು ಕನಸನ್ನು ಕಾಣುತ್ತಿದ್ದಾರೆ, ಆ ಒಂದೇ ಕುಟುಂಬದ ಸುತ್ತ ಅಧಿಕಾರ ಸುತ್ತುತ್ತಿರಬೇಕು ಎಂದು ಬಯಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಾಲಾದರೂ, ಮೂವರು ಸಚಿವರುಗಳು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಆದರೂ ಜಿಲ್ಲೆಗೆ ಅವರ ಕೊಡುಗೆಗಳು ಏನಿದೆ?, ಮೈ ಶುಗರ್ ಕಾರ್ಖಾನೆ ಸಮಸ್ಯೆ ನಾನು ಸಂಸದೆಯಾದ ನಂತರ ನನ್ನ ಪ್ರಯತ್ನದಿಂದ ಬಗೆಹರಿಯಿತು' ಎಂದು ಹೇಳಿದ್ದರು. 

Similar News