ಮಾತೆ, ಸಂಸ್ಕೃತಿ ಎಂದು ಭಾಷಣ ಮಾಡುವ BJP ನಾಯಕರು ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಿ: ಬಿ.ಕೆ ಹರಿಪ್ರಸಾದ್ ಕಿಡಿ

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ ವಿಚಾರ

Update: 2023-04-28 11:12 GMT

ಬೆಂಗಳೂರು: 'ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ, ಮತ್ತೆ ಅವರು ಚೀನಾ ಪಾಕಿಸ್ತಾನದ ಏಜೆಂಟ್' ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಹರಿಪ್ರಸಾದ್, ''ಆಚಾರವಿಲ್ಲದ ನಾಲಿಗೆ ನೀಚ ಗುಣವನ್ನೇ ಎತ್ತಿ ತೋರಿಸುತ್ತಿದೆ.ಯತ್ನಾಳ್ ಹೇಳಿಕೆ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಮಾತೆ,ಸಂಸ್ಕೃತಿ ಎಂದು ಬೊಗಳೆ ಭಾಷಣ ಮಾಡುವ ಬಿಜೆಪಿ ನಾಯಕರು ಕೂಡಲೇ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಛಾಟಿಸಿ,ಮಹಿಳಾ ಸಮುದಾಯಕ್ಕೆ ಕ್ಷಮೆ ಕೇಳಲಿ'' ಎಂದು ಒತ್ತಾಯಿಸಿದ್ದಾರೆ. 

''ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲಿನ ಗೌರವ ಯತ್ನಾಳ್ ಅವರ ಹೇಳಿಕೆ ಕೈಗನ್ನಡಿ'' ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. 

''ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ?'' ಎಂದು ಕೊಪ್ಪಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಯತ್ನಾಳ್ ಹೇಳಿಕೆ ನೀಡಿದ್ದರು.  

Similar News