ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: ರಸ್ತೆಯಲ್ಲಿಯೇ ಗಂಟೆಗಟ್ಟಲೇ ಕಾದ ಮದುಮಗ..!

Update: 2023-04-29 17:22 GMT

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ ಹಿನ್ನೆಲೆ ಸಂಚಾರ ದಟ್ಟಣೆ ಬಿಸಿ ಮದುಮಗನಿಗೂ ತಟ್ಟಿದ್ದು, ಕಲ್ಯಾಣ ಮಂಟಪಕ್ಕೆ ಹೋಗಬೇಕಾದ ವರ ಮದುವೆ ದಿರಿಸಿನಲ್ಲೇ ರಸ್ತೆಯಲ್ಲಿ ನಿಂತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶನಿವಾರ ಇಲ್ಲಿನ ನೈಸ್ ರಸ್ತೆ ಜಂಕ್ಷನ್‍ನಿಂದ ಸುಮ್ಮನಹಳ್ಳಿ ಸರ್ಕಲ್ ವರೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ವೇಳೆ ಕಲ್ಯಾಣ ಮಂಟಪಕ್ಕೆ ಹೋಗುತ್ತಿದ್ದವರನ ಕಾರನ್ನು ತಡೆದ ಪೊಲೀಸರು, ಮುಂದೆ ಹೋಗಲು ಅನುಮತಿ ನಿರಾಕರಿಸಿದರು. ಇದರಿಂದ ಮದುಮಗ ರುದ್ರೇಶ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಮದುವೆಗೆ ಹೋಗುತ್ತಿದ್ದವರನ್ನು ತಡೆದಿದ್ದಕ್ಕೆ ಆಕ್ರೋಶ ಹೊರಹಾಕಿದರು. ಆನಂತರ, ಮದುವೆ ಇರುವ ಬಗ್ಗೆ ಪೊಲೀಸರಿಗೆ ಮನವರಿಕೆ ಮಾಡಿಕೊಟ್ಟ ಬಳಿಕ ಕಲ್ಯಾಣ ಮಂಟಪಕ್ಕೆ ಹೋಗಲು ಪೊಲೀಸರು ಅನುಮತಿಸಿದರು.

Similar News