ಟ್ಯಾಂಕರ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2023-04-30 15:29 GMT
ಶಂಕರನಾರಾಯಣ, ಎ.30: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಿದ್ಧಾಪುರ ಕೆಳಪೇಟೆಯ ಆನಂತ ಪದ್ಮನಾಭ ಸಭಾಭವನದ ಬಳಿ ಎ.30ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಉಳ್ಳೂರು ಗ್ರಾಮದ ಬನಶಂಕರಿ ದೇವಸ್ಥಾನದ ಬಳಿಯ ನಿವಾಸಿ ಗುರುಪ್ರಸನ್ನ ಕರಣೀಕ(60) ಎಂದು ಗುರುತಿಸಲಾಗಿದೆ.
ಕಾರೆಬೈಲು ಕಡೆಯಿಂದ ಸಿದ್ಧಾಪುರ ಕಡೆಗೆ ಹೋಗುತ್ತಿದ್ದ ಟ್ಯಾಂಕರ್, ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗುರುಪ್ರಸನ್ನ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.