×
Ad

ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್‌ ಶೆಟ್ಟಿ ನೇತೃತ್ವದಲ್ಲಿ ಕಾಲ್ನಡಿಗೆ ಜಾಥ

Update: 2023-05-01 18:11 IST

ಕಾರ್ಕಳ: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್‌ ಶೆಟ್ಟಿ ಯವರ ಕಾಲ್ನಡಿಗೆ ಜಾಥವು ಕಾರ್ಕಳದ ಸ್ವರಾಜ್ಯ ಮೈದಾನದಿಂದ ಬಂಡಿಮಠ ಬಸ್ಸ್ ಸ್ಟ್ಯಾಂಡ್ ವರೆಗೆ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಜಾಥದಲ್ಲಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ ಆರ್ ರಾಜು, ಕೇರಳ ಸಂಸದ ಪ್ರತಾಪನ್, ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಎ ಗಫೂರ್, ಉದ್ಯಮಿ ಗಿರೀಶ್ ಶೆಟ್ಟಿ ಕುಡುಪುಲಾಜೆ, ಮಂಜುನಾಥ ಪೂಜಾರಿ, ಸುರೇಂದ್ರ ಶೆಟ್ಟಿ, ಪವರ್ ಟಿವಿ ಸಂಸ್ಥಾಪಕ ರಾಕೇಶ್ ಶೆಟ್ಟಿ, ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಪೆ ಅನಿತಾ ಡಿಸೋಜ, ದೇವಿಪ್ರಸಾದ್ ಶೆಟ್ಟಿ, ಅಣ್ಣಪ್ಪ ನಕ್ರೆ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಾಯಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್, ಉದ್ಯಮಿ ರಹೀಂ ಎಣ್ಣೆಹೊಳೆ, ನೀರೆ ಕ್ರಷ್ಣ ಶೆಟ್ಟಿ, ಪ್ರೇಮ್ ಕುಮಾರ್ ಹೊಸ್ಮಾರ್ ಉಪಸ್ಥಿತರಿದ್ದರು.

Similar News