ವರುಣಾದಲ್ಲಿ ಸೋಮಣ್ಣರನ್ನು ಗೆಲ್ಲಿಸಿದರೆ ದೊಡ್ಡ ವ್ಯಕ್ತಿಯಾಗಿ ಮಾಡುತ್ತೇವೆ: ಅಮಿತ್ ಶಾ

Update: 2023-05-02 15:47 GMT

ಮೈಸೂರು,ಮೇ.2: ಸಿದ್ಧರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಸಿದ್ದರಾಮಯ್ಯ ಅಭಿವೃದ್ದಿ ಮಾಡಲ್ಲ ಓಡಿ ಹೋಗುತ್ತಾರೆ. ಹೀಗಾಗಿ ವಿ.ಸೋಮಣ್ಣರಿಗೆ ಹೆಚ್ಚು ಮತ ನೀಡಿ ಗೆಲ್ಲಿಸಿದರೆ ಬಿಜೆಪಿಯು ಅವರನ್ನು ದೊಡ್ಡ ವ್ಯಕ್ತಿಯಾಗಿ ನಿಮ್ಮ ಮುಂದೆ ಬಂದು ನಿಲ್ಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

ವರುಣಾ ಕ್ಷೇತ್ರದ ಹೊಸಕೋಟೆಯಲ್ಲಿ ಮಂಗಳವಾರ  ನಡೆದ  ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಅಮಿತ್ ಶಾ, ಕರ್ನಾಟಕವನ್ನು ಅಭಿವೃದ್ದಿ ಮತ್ತು ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೇ ಪಿಎಫ್‍ಐ ನಿಷೇಧವನ್ನು ಹಿಂಪಡೆಯುತ್ತಾರೆ. ಕಾಂಗ್ರೆಸ್ ರಾಜ್ಯವನ್ನು ಎಟಿಎಂ ಮಾಡಲು ಹೊರಟಿದೆ. ಸಿದ್ದರಾಮಯ್ಯ ಅವರು ಲಿಂಗಾಯತರಿಗೆ ಅಪಮಾನ ಮಾಡಿದ್ದಾರೆ. ಆದರೆ ಬಿಜೆಪಿ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಿದೆ. ಸಿದ್ದರಾಮಯ್ಯ ಅವರು ಲಿಂಗಾಯತರು ಭಷ್ಟಾಚಾರಿಗಳು ಎನ್ನುವ ಮೂಲಕ ಲಿಂಗಾಯತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಚಾಮುಂಡೇಶ್ವರಿ, ವರುಣ ಅ ಮೇಲೆ ಬಾದಾಮಿ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಒಂದೊಂದು ಕ್ಷೇತ್ರ ಬದಲಾವಣೆ ಮಾಡುತ್ತಾರೆ . ಸಿದ್ದರಾಮಯ್ಯ ಅವರೆ ನೀವು ಯಾಕೆ ಪದೇ ಪದೇ ಕ್ಷೇತ್ರ ಬದಲಾಯಿಸುತ್ತೀರಿ. ವರುಣಾ ಮತದಾರರೇ ನಿವೃತ್ತಿ ಹೊಂದುವ ನಾಯಕ ಬೇಕಾ ಅಥವಾ ಭವಿಷ್ಯದ ಬಗ್ಗೆ ಯೋಜಿಸುವ ನಾಯಕ ಬೇಕಾ.  ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ. ವರುಣಾ ಜನರು ಸಿದ್ದರಾಮಯ್ಯಗೆ ಮತ ನೀಡಬೇಡಿ. ವಿ ಸೋಮಣ್ಣ ಅವರನ್ನು ಗೆಲ್ಲಿಸಿದರೇ, ವರುಣಾವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ಹೀಗಾಗಿ ಸೋಮಣ್ಣ ಅವರನ್ನ ಶಾಸಕರಾಗಿ ಆಯ್ಕೆ ಮಾಡಬೇಕು. ಸೋಮಣ್ಣ ಅತಿ ಹೆಚ್ಚು ಮತಗಳಿಂದ ಗೆಲ್ಲಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ನಟ ಶಶಿಕುಮಾರ್, ಬಿಜೆಪಿ ಮುಖಂಡ ಎಲ್.ರೇವಣ್ಣ ಸಿದ್ಧಯ್ಯ, ಟಿ.ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರೇವಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಹರ್ಷವರ್ಧನ್, ಬಿಜೆಪಿ ಮುಖಂಡರುಗಳಾದ ದೇವನೂರು ಪ್ರತಾಪ್, ಸದಾನಂದ, ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಕಾಪು ಸಿದ್ಧಲಿಂಗಸ್ವಾಮಿ, ಗಿರೀಶ್ ಉಪ್ಪಾರ್ ಉಪಸ್ಥಿತರಿದ್ದರು.

Similar News