ಪ್ರೀತಂಗೌಡ ಸೋಲನ್ನು ನಾನು ಕಣ್ಣಾರೆ ನೋಡಬೇಕು: ಎಚ್.ಡಿ. ದೇವೇಗೌಡ

Update: 2023-05-04 17:33 GMT

ಹಾಸನ : ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪು ಮರುಕಳಿಸದೇ ಎಚ್ಚರದಿಂದ ಇದ್ದು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು. ಅಭಿವೃದ್ಧಿಗೆ ಮಾರಕವಾಗಿರುವವರು ಈ ಚುನಾವಣೆಯಲ್ಲಿ ಅಂತ್ಯವಾಗಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದರು.

ನಗರದ 80 ಫಿಟ್ ರಸ್ತೆ ಮಧ್ಯೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 'ಕಳೆದ ಬಾರಿ ನೀವು ಬಿಜೆಪಿಗೆ ಬೆಂಬಲ ನೀಡಿದಿರಿ. ನಿಮ್ಮಲ್ಲಿ ವಿನಂತಿ ಮಾಡುತ್ತೇವೆ. ಮತ್ತೆ ಅದೇ ತಪ್ಪು ಮಾಡಬೇಡಿ. ಸ್ವರೂಪ್ ಬಳಿ ದುಡ್ಡಿದಿಯೋ ಇಲ್ಲವೋ ಗೊತ್ತಿಲ್ಲ. ನಮಗೆ ಒಂದು ಜವಾಬ್ದಾರಿ ಇದೆ.  ಹಾಸನ ಕ್ಷೇತ್ರಕ್ಕೆ ಒಬ್ಬ ನಾಯಕ  ಬೇಕು ಅದು ಸ್ವರೂಪ್ ಆಗಬೇಕು. ಯಾವ ವ್ಯಕ್ತಿ ನನ್ನ ಜಿಲ್ಲೆಯ ಪ್ರಗತಿಗೆ ಮಾರಕವಾದವರ  ಬಗ್ಗೆ ನಿಮಗೆ ಎಚ್ಚರವಿರಲಿ ಎಂದರು.

ಪ್ರಮುಖವಾಗಿ ಹಾಸನ ಜಿಲ್ಲೆಯರು ಪ್ರತಿಯೊಬ್ಬರು ಎಚ್ಚರಿಕೆಯಿಂದಿರಿ, ಎಷ್ಟೇ ಹಣ ಖರ್ಚು ಮಾಡಿದರೂ ಅವರ ಅಂತ್ಯವನ್ನು ಈ ಕಣ್ಣಿನಿಂದ ನಾನು ನೋಡಬೇಕು. ಕೈಮುಗಿದು ಕೇಳಿಕೊಳ್ಳುತ್ತೇವೆ ಇಂತಹ ವ್ಯಕ್ತಿ ಬೇಡ ಎಂದು ಭಾವುಕರಾಗಿ ನುಡಿದರು.

ಸಮಾವೇಶದಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ ಸ್ವರೂಪ್, ಅವರ ತಾಯಿ ಲಲಿತಮ್ಮ, ಸ್ವಾಮಿಗೌಡ, ನಗರಸಭೆ ಸದಸ್ಯರು, ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Similar News