ವಿಜಯಪುರ: ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ

Update: 2023-05-06 09:24 GMT

ವಿಜಯಪುರ: ನಗರದ 19ನೇ ವಾರ್ಡ್‌ನ ಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಇಲ್ಲಿನ ಚಾಂದಪುರ ಕಾಲೋನಿಯಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ. 

ಹೈದರ್ ಅಲಿ ನದಾಫ್ ಹತ್ಯೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸ್ಥಳದಲ್ಲಿಯೇ ಹೈದರ್ ಅಲಿ ನದಾಫ್ ಮೃತಪಟ್ಟಿದ್ದಾರೆ. ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. 

ಇತ್ತೀಚೆಗೆ ವಿಜಯಪುರ ಪಾಲಿಕೆಗೆ ನಡೆದಿದ್ದ  ಚುನಾವಣೆಯಲ್ಲಿ ಹೈದರ್ ನದಾಫ್  ಪತ್ನಿ ನಿಶಾತ್ ನದಾಫ್ ವಾರ್ಡ್ ನಂ.19 ರಿಂದ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Similar News